ಅಡ್ಕಾರಿನಲ್ಲಿ 6ನೇ ವರ್ಷದ ಶ್ರೀ ಶಾರದಾಂಬ ಉತ್ಸವ

0

ಇಂದು ಸಂಜೆ ಶ್ರೀದೇವಿಯ ಶೋಭಾಯಾತ್ರೆ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿ ವತಿಯಿಂದ 6ನೇ ವರ್ಷದ ಶ್ರೀ ಶಾರದಾಂಬ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಅ.12ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ಪ್ರತಿಷ್ಠೆ ಜರುಗಿತು.

ಬಳಿಕ ಬಾಲಸರಸ್ವತಿ ಹೋಮ, ಮಕ್ಕಳಿಗೆ ಅಕ್ಷರಾಭ್ಯಾಸ, ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿ ಅಧ್ಯಕ್ಷ ಯತೀಂದ್ರ ಅಡ್ಕಾರುಬೈಲು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಅಪರಾಹ್ನ ಧ್ವಜಾವತರಣ ಬಳಿಕ ಶ್ರೀ ಶಾರದಾಂಬ ದೇವಿಯ ವಿಗ್ರಹದ ಶೋಭಾಯಾತ್ರೆಯು ಸಿಂಗಾರಿ ಮೇಳ ಮತ್ತು ಕುಣಿತ ಭಜನೆಯೊಂದಿಗೆ ಸಾಗಿ ಪಯಸ್ವಿನಿ ನದಿಯಲ್ಲಿ ಜಲಸ್ಥಂಭನಗೊಳಿಸಲಾಗುವುದು.