ದೇವರಕಾನ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಆಯುಧಪೂಜೆ

0

ಮುರುಳ್ಯ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ದೇವರಕಾನ ಇಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಅ. 11ರಂದು ಬೆಳಿಗ್ಗೆ ಆಯುಧ ಪೂಜೆ, ಮಹಾಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಜನಾ ಕಾರ್ಯಕ್ರಮ ಬಳಿಕ ದೀಪರಾಧನೆ ರಾತ್ರಿ ಶ್ರೀ ದೇವರಿಗೆ ರಂಗ ಪೂಜೆ ಪ್ರಸಾದ ವಿತರಣೆ, ಭೋಜನ
ಪ್ರಸಾದ ನಡೆಯಿತು.


ಅ. 12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಭ್ಯಾಸ, ತೆನೆಹಬ್ಬ ಮತ್ತು ವಿತರಣೆ, ಮಧ್ಯಾಹ್ನ ಪೂಜೆಯ ಬಳಿಕ ನವನ್ನಾ ಭೋಜನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಕ್ಷ್ಮೀ ನರಸಿಂಹ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾಮಚಂದ್ರ ಭಟ್ ದೇವಸ್ಯ,ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಕೇಶವ ಭಟ್ ಪೊಳೆಂಜ, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಳಿ, ಅಜರಂಗಳ,ಭಜನಾ ಮಂಡಳಿ ಅಧ್ಯಕ್ಷ ಎಂ.ಬಿ.ದಿನೇಶ್ ಕುಮಾರ್ ಮುರುಳ್ಯ ಮತ್ತು ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.