ಬಾಳಿಲದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ,

0

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ. 12 ಮತ್ತು 13ರಂದು ಬಾಳಿಲದಲ್ಲಿ ನಡೆಯಿತು.


ಅ. 12ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹ ಆಗಮನ, ಗಣಪತಿ ಹವನ, ಶಾರದಾದೇವಿಯ ಪ್ರತಿಷ್ಠೆ, ಆಭರಣಧಾರಣೆ, ಶಾರದಾದೇವಿಗೆ ಕಾಲು ಉಂಗುರ ಸಮರ್ಪಣೆ ಬಳಿಕ ಬಾಬು ಅಜಿಲ ಬಾಳಿಲ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು.

ಸಾರ್ವಜನಿಕ ಮಹಿಳೆಯರಿಗೆ ಲಲಿತ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ನಡೆದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇದರ ನೇತೃತ್ವದ ತರಬೇತಿ ಪಡೆಯುತ್ತಿರುವ ಮಕ್ಕಳಿಂದ ಭರತನಾಟ್ಯ ಸಂಗೀತ ಹಾಗೂ ಸಮುದ್ರ ಮಥನ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಕೀಚಕ ವಧೆ – ಅಗ್ರಪೂಜೆ ನಡೆಯಿತು.


ಅ. 13ರಂದು ಬೆಳಿಗ್ಗೆ ಗೀತಜ್ಞಾನ ಯಜ್ಞ ಘಟಕ ಬಾಳಿಲ ಇವರಿಂದ ಶ್ರೀಮದ್ ಭಗವದ್ಗೀತೆ ಪಾರಾಯಣ, ಕಳಂಜ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು.ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಿಶ್ರಾಂತ ಮುಖ್ಯ ಶಿಕ್ಷಕರಾದ ಎ. ಜತ್ತಪ್ಪರಿಗೆ ರಾಮಚಂದ್ರ ಕೆದಿಲ ಸ್ಮರಣಾರ್ಥ ಶ್ರೀ ಶಾರದೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದೇಶದಲ್ಲಿ ಉದ್ಯಮಿಯಾಗಿರುವ ತಾರಾನಾಥ ರೈ ಉರುಂಬಿ ಶುಭಾಸಂಶನೆಗಳನ್ನಾಡಿದರು. ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು, ಕಡಬ ತಾ.ಪಂ. ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೊ. ಚಂದ್ರಶೇಖರ ರೈ ಬಜನಿ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಹಾಯಕ ಪೊಲೀಸ್ ಉಪನಿರೀಕ್ಷಕ ಬಾಬು ಹೊನ್ನಡ್ಕ ಮತ್ತು ಆಲೆಟ್ಟಿ ಗ್ರಾ.ಪಂ.ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸುಂದರ ಎಂ.ರವರಿಗೆ ಸೇವಾ ಪುರಸ್ಕಾರ, ನಿವೃತ್ತ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ, ಶ್ರೀಮತಿ ಸಿ.ಸಿ. ಬೇಬಿ, ನಿವೃತ್ತ ಕಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಶ್ರೀಮತಿ ವಸಂತಿ ಎಸ್. ಭಟ್ ರಿಗೆ ಗೌರವಾರ್ಪಣೆ ನಡೆಯಿತು. ಡಾ. ಪಲ್ಲವಿ ತೆಕ್ಕಕೆರೆ, ಡಾ. ಕಿರಣ್ ಯು. ಬಾಳಿಲ, ಡಾ. ಮಧುರಾ ಕಾಯಾರ ಮತ್ತು ಡಾ. ಭವಿಷ್ಯ್ ರೈ ಯವರಿಗೆ ವಿಶೇಷ ಪುರಸ್ಕಾರ, ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿದ್ಯಾರ್ಥಿಗಳಿಗಳಾದ ಕು. ಪ್ರತೀಕಾ ಕೆ.ಎಂ, ಶಿವಕೃಷ್ಣ ಎನ್, ಕು. ಖುಷಿ ರೈ ಅಗಲ್ಪಾಡಿ, ಕು. ವರ್ಷಾ ಎಸ್.ರೈ ಉರುಂಬಿ, ಕು. ನಿಧಿ ರೈ ದೇರಂಪಾಲು, ಪ್ರದೀಪ್ ಪಿ. ತೋಟ, ಸಮೃದ್ಧಿ ಶೆಟ್ಟಿ ಬಜನಿ, ಕು. ರಕ್ಷಾ ಮುಪ್ಪೇರ್ಯ, ಕು. ಶರಣ್ಯ ರೈ ಟಪ್ಪಾಲುಕಟ್ಟೆ ಮತ್ತು ರಾಮಕೃಷ್ಣ ಆರ್. ರವರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಸಮಿತಿಯ ಅಧ್ಯಕ್ಷ ಶೇಷಪ್ಪ ಪರವ ಬಾಳಿಲ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ, ಸಮಿತಿಯ ಗೌರವ ಸಲಹೆಗಾರರಾದ ಎ.ಕೆ. ನಾಯ್ಕ್ ಅಮೆಬೈಲು, ಅಶೋಕ್ ಶೆಟ್ಟಿ ಅರ್ಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಶೋಭ ಎ.ಕೆ. ನಾಯ್ಕ್ ಪ್ರಾರ್ಥಿಸಿದರು. ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಸಮಿತಿಯ ಸದಸ್ಯ ರಾಜೇಶ್ ಎ ವಂದಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿ, ಸನ್ಮಾನ ಪತ್ರ ವಾಚಿಸಿದರು. ಮಧ್ಯಾಹ್ನ ವಿಶ್ವದಾಖಲೆ ಬರೆದ ಯೋಗಪಟು ಕು. ಅಕ್ಷಯ ಬಾಬ್ಲುಬೆಟ್ಟು ರವರಿಂದ ಯೋಗಾಸನ ಪ್ರದರ್ಶನ, ಬಳಿಕ ಬಾಳಿಲ ನಟರಾಜ ನೃತ್ಯತಂಡದಿಂದ ನೃತ್ಯ ವೈಭವ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಬಳಿಕ ಅಪರಾಹ್ನ ಕುಣಿತ ಭಜನೆ, ಚೆಂಡೆವಾದನ ಗೊಂಬೆ ಕುಣಿತ, ಬ್ಯಾಂಡ್ ವಾದನ ಸೇರಿದಂತೆ ವಿಶೇಷ ಆಕರ್ಷಣೆಯೊಂದಿಗೆ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ನಡೆಯ ಬೊಮ್ಮಣಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.