ಕೊಡಿಯಾಲ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಶಂಕರ ನಾಯಕ್ ರನ್ನು ಆಸ್ಪತ್ರೆಯಿಂದ ಕಸ್ಟಡಿಗೆ ಪಡೆದ ಪೊಲೀಸರು

0

ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಸ್ವಂತ ಅತ್ತಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಶಂಕರ ನಾಯಕ್ ರವರನ್ನು ಬೆಳ್ಳಾರೆ ಪೊಲೀಸರು ಆಸ್ಪತ್ರೆಯಿಂದ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬೆಂಕಿ ಹಚ್ಚಿದ್ದ ವೇಳೆ ಬೆಂಕಿ ವ್ಯಾಪಿಸಿ ಇವರಿಗೂ ಗಾಯವಾಗಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇವರು ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈ ವೇಳೆ ಅವರನ್ನು ಕಸ್ಟಡಿಗೆ ಪಡೆದ ಪೊಲೀಸರು ವಿಚಾರಣೆಗೆಂದು ಬೆಳ್ಳಾರೆ ಠಾಣೆಗೆ ಕರೆದೊಯ್ದಿದ್ದಾರೆ.


ವಿಚಾರಣೆ ಬಳಿಕ ಪೊಲೀಸರು ಇಂದೇ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.


ಘಟನೆಯಿಂದ ಗಂಭೀರ ಗಾಯಗೊಂಡಿರುವ ಜಯಭಾರತಿಯವರು ಮಂಗಳೂರು ಎ ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.