ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೀಲಾ ದಾಮೋದರ್ ಆಯ್ಕೆ

0

ಅರಂತೋಡಿನಲ್ಲಿ ನ. 23 ರಂದು ನಡೆಯಲಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಶ್ರೀಮತಿ ಲೀಲಾ ದಾಮೋದರ್ ಆಯ್ಕೆಯಾಗಿದ್ದಾರೆ.


ಇಂದು ಕನ್ನಡ ಭವನದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನ ಸ್ವಾಗತ ಸಮಿತಿ ಮತ್ತು ಸಮ್ಮೇಳನದ ಪೂರ್ವಾಧ್ಯಕ್ಷರ ಸಭೆಯಲ್ಲಿ ಲೀಲಾ ದಾಮೋದರ್ ರವರನ್ನು
ಸರ್ವಾನುಮತದಿಂದ
ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.