ಹಿಂದೂ ಯುವತಿಯರ ಬಗ್ಗೆ ಅವಹೇಳನ ಆರೋಪ : ಪಂಜ ಉಪವಲಯಾರಣ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

0

ಹಿಂದೂ ಯುವತಿಯರ ಬಗ್ಗೆ ಅವಹೇಳನ ಮಾಡಿರುವುದಾಗಿ ಪಂಜ ಉಪವಲಯಾರಣ್ಯಾಧಿಕಾರಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.17 ರಂದು ಪ್ರಕರಣ ದಾಖಲಾಗಿದೆ.
ಪಂಜ ಅರಣ್ಯ ಇಲಾಖೆ ಉಪವಲಯಾರಣ್ಯಾಧಿಕಾರಿ ಸಂಜೀವ ಪೂಜಾರಿಯವರು ಹಿಂದೂ ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದಾಗಿ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.