ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ಸೈಂಟ್ ಜೋಸೆಫ್ ನಲ್ಲಿ “ಗುಡ್ ಟು ಗ್ರೇಟ್ ಟೀಚರ್” ತರಬೇತಿ ಕಾರ್ಯಕ್ರಮ

0

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಅ. 18 ,19‌ ಮತ್ತು 20 ರಂದು ಸುಳ್ಯ, ಪುತ್ತೂರು, ಮಂಗಳೂರಿನ ವಿವಿಧ ಕಾಲೇಜುಗಳಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ನಡೆಯಲಿದ್ದು ಇದರ ಆರಂಭಿಕ ಕಾರ್ಯಕ್ರಮ
ಅ.18 ರಂದು ಬೆಳಿಗ್ಗೆ ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ “ಗುಡ್ ಟು ಗ್ರೇಟ್‌ ಟೀಚರ್ “
ಎಂಬ ಶೀರ್ಷಿಕೆಯಡಿಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು


ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ತರಬೇತಿ ಮತ್ತು ಆಡಳಿತ ಅಭಿವೃದ್ಧಿ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರು ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ ಮತ್ತು ಫಾರ್ಮೆಡ್ ಲಿಮಿಟೆಡ್ ನ ತರಬೇತಿ ವಿಭಾಗದ ಸಹಾಯಕ ಉಪಾಧ್ಯಕ್ಷರು ಅಂತರರಾಷ್ಟ್ರೀಯ ತರಬೇತುದಾರ ವಿಕ್ರಂ ಸಾಗರ್ ಸಕ್ಸೇನಾ ರವರು ನಡೆಸಿಕೊಟ್ಟರು.


ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಶಾಲೆ ಸಂಚಾಲಕ ರೆ.ಪಾ.ವಿಕ್ಟರ್ ಡಿಸೋಜ ಉದ್ಘಾಟಿಸಿದರು.
ಮುಖ್ಯ ಶಿಕ್ಷಕಿ ಸಿಸ್ಟರ್ ಮೇರಿಸ್ಟೆಲ್ಲಾ,ಪತ್ರಕರ್ತ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು.