ವಿಧಾನ ಪರಿಷತ್ ಉಪಚುನಾವಣೆಯ : ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

0

ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಇಂದು ಅಪರಾಹ್ನ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಈ ಚುನಾವಣೆಯ ವೀಕ್ಷಕರಾದ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ ಸಭೆಯಲ್ಲಿ ಉಪಸ್ಥಿತರಿದ್ದರು. ‌


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಧಾನ ಪರಿಷತ್ ಜಿ.ಪಂ.ಕ್ಷೇತ್ರವಾರು ಚುನಾವಣಾ ವೀಕ್ಷಕರುಗಳಾದ ಸರಸ್ವತಿ ಕಾಮತ್, ಎಂ.ವೆಂಕಪ್ಪ ಗೌಡ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೆ.ಪಿ.ಸಿ.ಸಿ. ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಎಸ್.ಸಂಶುದ್ದೀನ್, ಕೆ.ಎಂ.ಮುಸ್ತಫ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ಪ್ರವೀಣ್ ಮುಂಡೋಡಿ, ಫವಾಜ್ ಕನಕಮಜಲು, ಶಾಫಿ ಕುತ್ತಮೊಟ್ಟೆ, ಜಯಪ್ರಕಾಶ್ ನೆಕ್ರೆಪ್ಪಾಡಿ, ಸುಜಯಕೃಷ್ಣ, ನಂದರಾಜ್ ಸಂಕೇಶ, ರಾಧಾಕೃಷ್ಣ ಬೊಳ್ಳೂರು, ಸಚಿನ್ ರಾಜ್ ಶೆಟ್ಟಿ, ದಿನೇಶ್ ಅಂಬೆಕಲ್ಲು, ರಿಯಾಜ್ ಕಟ್ಟೆಕಾರ್, ಪರಮೇಶ್ವರ ಕೆಂಬಾರೆ, ಮೊದಲಾದವರು ಉಪಸ್ಥಿತರಿದ್ದರು.