ಪಂಜ:ಜೇಸಿ ಸಪ್ತಾಹ ಅಂಗವಾಗಿ: ಕೌಟುಂಬಿಕ ತರಬೇತಿ ಕಾರ್ಯಗಾರ

0

⬆️ ಇಂದು (ಅ‌19 )ಅರವಿಂದ್ ಬೋಳಾರ್ ಅಭಿನಯದ ತುಳು ಹಾಸ್ಯಮಯ ನಾಟಕ ಪ್ರದರ್ಶನ,

⬆️ ನೃತ್ಯ ಸಂಭ್ರಮ,ಕಮಲ ಪತ್ರ ಪುರಸ್ಕಾರ

ಪಂಜ ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ -2024 ಅ.13 ರಂದು ಆರಂಭಗೊಂಡು ಇಂದು (ಅ.19) ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮಾರೋಪ ಗೊಳ್ಳಲಿದ್ದು ಆ ಪ್ರಯುಕ್ತ
ಅರವಿಂದ್ ಬೋಳಾರ್ ಪಾತ್ರದ ತುಳು ಹಾಸ್ಯಮಯ ನಾಟಕ ಪ್ರದರ್ಶನ, ನೃತ್ಯ ಸಂಭ್ರಮ,ಕಮಲ ಪತ್ರ ಪುರಸ್ಕಾರ , ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜೇಸಿ ಸಪ್ತಾಹದ ಅಂಗವಾಗಿ
ಅ.18 ರಂದು ಸಂಜೆ ಪಂಜ ಲಯನ್ಸ್ ಭವನದಲ್ಲಿ ಮನೆಯೊಳಗೊಂದು ಮಧುಬಿಂಧು ಕೌಟುಂಬಿಕ ತರಬೇತಿ ಕಾರ್ಯಗಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಮಾತನಾಡಿದರು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೀವನ್ ಮಲ್ಕಜೆ ಸಭಾಧ್ಯಕ್ಷತೆ ವಹಿಸಿದ್ದರು. ತರಬೇತುದಾರದ ಜೇಸಿಐ ವಲಯ ತರಬೇತುದಾರ ವಿಕ್ರಮ ನಾಯಕ್, ಜೇಸಿಐ ಪಂಜ ಪಂಚಶ್ರೀ ನಿಕಟಪೂರ್ವಾಧ್ಯಕ್ಷ ಲೋಕೇಶ್ ಆಕ್ರಿಕಟ್ಟೆ, ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ, ಸಪ್ತಾಹ ನಿರ್ದೇಶಕ ವಾಚಣ್ಣ ಕೆರೆಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುನೀತ್ ಮೂಲೆಮನೆ ವೇದಿಕೆಗೆ ಆಹ್ವಾನಿಸಿದರು. ಜೀವನ್ ಮಲ್ಕಜೆ ಸ್ವಾಗತಿಸಿದರು.ಶ್ರೇಯಸ್ ತುಪ್ಪದ ಮನೆ ಜೇಸಿ ವಾಣಿ ನುಡಿದರು. ವಿಜೇಶ್ ಹಿರಿಯಡ್ಕ ಅತಿಥಿಯನ್ನು ಪರಿಚಯಿಸಿದರು. ಜೀವನ್ ಶೆಟ್ಟಿಗದ್ದೆ. ವಂದಿಸಿದರು.

ಇಂದು (ಅ.19)ಸಮಾರೋಪ ಸಮಾರಂಭ: ಅ.19 ರಂದು ಸಂಜೆ ಗಂಟೆ 6 ರಿಂದ ಸಮಾರೋಪ ಸಮಾರಂಭ ಜರುಗಲಿದೆ. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಜ್ಞಾನ ಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಪಿ ಉಮೇಶ್ ಪಾಲ್ಗೊಳ್ಳಲಿದ್ದಾರೆ. ಜೇಸಿಐ ಪಂಜ ಪಂಚಶ್ರೀ ಪೂರ್ವಾಧ್ಯಕ್ಷ ವಾಸುದೇವ ಮೇಲ್ಪಾಡಿ ರವರಿಗೆ ಕಮಲ ಪತ್ರ ಪುರಸ್ಕಾರ ನಡೆಯಲಿದೆ. ಜೇಸಿಐ ಪೂರ್ವ ವಲಯಾಧ್ಯಕ್ಷ ಪುರಂದರ ರೈ ಪರಸ್ಕರಿಸುವವರು. ಅಂತರಾಷ್ಟ್ರೀಯ ಈಜು ಪಟು ದಿಗಂತ್ ವಿ ಎಸ್, ಮೈಸೂರು ವಿಶ್ವವಿದ್ಯಾನಿಲಯದ ರ್‍ಯಾಂಕ್ ವಿಜೇತೆ ಪ್ರಜ್ಞಾ ಎ ಡಿಸೋಜ, ಉದಯೋನ್ಮುಖ ಯಕ್ಷಗಾನ ಭಾಗವತ ರಚನಾ ಚಿದ್ಗಲ್ ರವರು ಸನ್ಮಾನ ಸ್ವೀಕರಿಸಲಿದ್ದಾರೆ. ಪಂಚಶ್ರೀ ವಿದ್ಯಾನಿಧಿ ಸಮರ್ಪಣೆ ನಡೆಯಲಿದೆ . ಸಾಂಸ್ಕೃತಿಕ ಸಂಭ್ರಮದಲ್ಲಿ ಡ್ಯಾನ್ಸ್ ಮತ್ತು ಬೀಟ್ಸ್ ಮತ್ತು ಸಂಸ್ಥೆ ವಿದ್ಯಾರ್ಥಿಗಳಿಂದ ನೃತ್ಯ ಸಂಭ್ರಮ, ಲಕುಮಿ ತಂಡದ ಕುಸಾಲ್ದ ಕಲಾವಿದರ್ ಅಭಿನಯಿಸುವ ಅರವಿಂದ್ ಬೋಳಾರ್ ವಿಭಿನ್ನ ಪಾತ್ರದ ತುಳು ಹಾಸ್ಯಮಯ ನಾಟಕ ಒರಿಯಾಂಡಲಾ ಸರಿಬೋಡು ಪ್ರದರ್ಶನಗೊಳ್ಳಲಿದೆ.