ಸವಣೂರು ಸೀತಾರಾಮ ರೈ, ಫಾ| ವಿಕ್ಟರ್ ಡಿಸೋಜಾರಿಗೆ ಬೆಸ್ಟ್ ಮ್ಯಾನೆಜ್ಮೆಂಟ್ ಅವಾರ್ಡ್

0

ವೀಣಾ ಶೇಡಿಕಜೆ, ಮಂಜುನಾಥ್ ಬಂಗ್ಲೆಗುಡ್ಡೆ, ಲಕ್ಷ್ಮೀನಾರಾಯಣ ಕೇರ್ಪಳರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ, ಕರ್ನಾಟಕ (ರುಪ್ಸ) ಇವರು ಕೊಡ ಮಾಡುವ ೨೦೨೪ ನೇ ಸಾಲಿನ ರಾಜ್ಯ ಮಟ್ಟದ ಬೆಸ್ಟ್ ಮ್ಯಾನೇಜ್ಮೆಂಟ್ ಪ್ರಶಸ್ತಿಗೆ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ, ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಸಂಚಾಲಕರಾದ ಫಾ| ವಿಕ್ಟರ್ ಡಿ ಸೋಜಾರವರು ಭಾಜನರಾಗಿದ್ದಾರೆ.
ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿಗೆ ಸುಳ್ಯ ರೋಟರಿ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಸುಳ್ಯ ಗ್ರೀನ್ ವ್ಯೂ ವಿದ್ಯಾಸಂಸ್ಥೆಯ ಶಿಕ್ಷಕ ಮಂಜುನಾಥ ಬಂಗ್ಲೆಗುಡ್ಡೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಬೆಳ್ತಂಗಡಿ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಲಕ್ಷ್ಮಿ ನಾರಾಯಣ ಕೇರ್ಪಳರವರು ಭಾಜನರಾಗಿದ್ದಾರೆ. ಅ.೨೧ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.