ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

0

ಅರಂತೋಡಿನ ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕ ತೀರ್ಥರಾಮ ಪರ್ನೋಜಿ ಉಳುವಾರು , ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್, ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮನ್ಸೂರ್ ಪಾರೆಕ್ಕಲ್, ಸಂಚಾಲಕ ಅಬ್ದುಲ್ ಮಜೀದ್, ಕಾರ್ಯದರ್ಶಿ ಅಬ್ದುಲ್ ಖಾದರ್ ಮೊಟ್ಟೆಂಗಾರ್, ಹಬೀಬ್ ಗುಂಡಿ, ಜಾವೇದ್ ಪೆಲ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.