ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ತರಗತಿ ಪ್ರಾರಂಭ

0

ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಅ.20ರಂದು ಉದ್ಘಾಟನೆಗೊಂಡಿತು.

ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಆಗಿರುವ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವಪ್ರಸಾದ್‌ ಮುಳಿಯ ಮತ್ತು ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳಿಕೃಷ್ಣ ಹಸಂತಡ್ಕ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ಶಿಕ್ಷಣ ಆರಂಭಗೊಂಡಿದೆ.

ಸಂಪನ್ಮೂಲ ವ್ಯಕ್ತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಧಾರ್ಮಿಕ ಶಿಕ್ಷಣ ತರಗತಿಯನ್ನು ಉದ್ಘಾಟಿಸಿದರು. ಭಜನೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ 100ಕ್ಕೂ ತರಗತಿ ನಡೆಸಿ ಮಾಹಿತಿಯನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಸದಸ್ಯೆ ಬಿ.ಕೆ.ವೀಣಾ ಅವರು ಧಾರ್ಮಿಕ ಶಿಕ್ಷಣದ ಮಾಹಿತಿ ಹಾಗೂ ತಮ್ಮ ಕೇಂದ್ರದ ಮುಖೇನ ಬಿಡುಗಡೆಗೊಳಿಸಿರುವ ಧಾರ್ಮಿಕ ಪಠ್ಯಪುಸ್ತಕ ಕುರಿತಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ಸಂಚಾಲಕ ವಸಂತ ನಡುಬೈಲು, ಗೌರವಾಧ್ಯಕ್ಷರಾದ ಐತ್ತಪ್ಪ ಅಲೆಕ್ಕಾಡಿ, ವಸಂತ ಹುದೇರಿ, ಅಧ್ಯಕ್ಷ ಧ್ರುವಕುಮಾರ್ ಕೇರ್ಪಡ, ಕೇರ್ಪಡದ ವ್ಯವಸ್ಥಾಪನಾ ಸಮಿತಿಯ ಸದಸ್ಯ ರೂಪರಾಜ ರೈ, ಕೇಂದ್ರದ ಸಂಪನ್ಮೂಲ ವ್ಯಕ್ತಿಯಾದ ಸುಹಾಸ್ ಅಲೆಕ್ಕಾಡಿ, ನಿಂತಿಕಲ್ಲು ವಲಯ ಭಜನಾ ಪರಿಷತ್ ಅಧ್ಯಕ್ಷ ಪದ್ಮನಾಭ ಪೂದೆ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. (ವರದಿ : ಎಎಸ್ಎಸ್.)