ಜೆ.ಜೆ.ಎಂ. ಕುರಿತು ಬೆಂಗಳೂರಿನ ತರಬೇತಿ ಕಾರ್ಯಾಗಾರಕ್ಕೆ ಸಂಪಾಜೆಯ ಜಿ. ಕೆ. ಹಮೀದ್

0

ಜಲ ಜೀವನ ಮಿಷನ್ ಅಡಿಯಲ್ಲಿ Wrte Shop on JJM Handing over Process ಕುರಿತು ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ತರಬೇತಿಗೆ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಾಗಿರುವ ಜಿ.ಕೆ. ಹಮೀದ್ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಸಂಪಾಜೆ ಗ್ರಾಮ ಕುಡಿಯುವ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ತೆರಳುತ್ತಿದ್ದು ಕರ್ನಾಟಕ ರಾಜ್ಯದ ಬೇರೆ ಜಿಲ್ಲೆಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅ.22 ಮತ್ತು ಅ.23ರಂದು ಎರಡು ದಿನ ಬೆಂಗಳೂರಿನಲ್ಲಿ ತರಬೇತಿ ಕಾರ್ಯಾಗಾರ ನಡೆಯಲಿದೆ.