ನ.20ರಂದು ಕಳಂಜದ ಕೋಟೆಮುಂಡುಗಾರಿನಲ್ಲಿ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ, ಪೂರ್ವಭಾವಿ ಸಭೆ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ ನ.20 ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಛೇರಿ ಕಳಂಜದ ಕೋಟೆಮುಂಡುಗಾರಿನಲ್ಲಿ ನಡೆಯಲಿದೆ.


ಸಂಘದ
ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕ ಎಸ್.ಎನ್ ಮನ್ಮಥ, ಸಹಕಾರಿ ಸಂಘಗಳ ತಾಲೂಕು ಅಧ್ಯಕ್ಷ ರಮೇಶ್ ದೇಲಂಪಾಡಿ, ಆಲೆಟ್ಟಿ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಆಲೆಟ್ಟಿ, ಕಳಂಜ ಬಾಳಿಲ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ್ ನಾಯಕ್ ಉಪಸ್ಥಿತರಿದ್ದರು.


ಸಭೆಯಲ್ಲಿ ನಿರ್ದೇಶಕರುಗಳಾದ ಕರುಣಾಕರ ನಾಲ್ಗುತ್ತು, ಮೇದಪ್ಪ ಗೌಡ ತಂಟೆಪ್ಪಾಡಿ, ಸುಬ್ರಹ್ಮಣ್ಯ ಭಟ್ ಕಾವಿನಮೂಲೆ, ಭಾರತಿ ಶಂಕರ್ ಆದಾಳ, ಶುಭಕುಮಾರ್, ಮಾಲಿನಿ ಪ್ರಸಾದ್, ಪಂಕಜಾಕ್ಷಿ, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಿಕ್ರಂ, ನಿರ್ದೇಶಕ ಹೇಮಂತ್ ಕುಮಾರ್, ಕಲ್ಮಡ್ಕ ಸೊಸೈಟಿ ನಿರ್ದೇಶಕ ಪುನಿತ್ ಮಡಪ್ಪಾಡಿ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ, ಅರಂತೋಡು ಸೊಸೈಟಿ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ,
ಸುಳ್ಯ ಸಿ.ಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಸುದರ್ಶನ, ಉಬರಡ್ಕ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್, ಕುಕ್ಕುಜಡ್ಕ ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಮೋಹನ್, ಕಳಂಜ ಯುವಕ ಮಂಡಲದ ರಾಮಯ್ಯ ರೈ, ಶಿವರಾಮ ಕಜೆಮೂಲೆ, ಗಂಗಾಧರ ತೋಟದ‌ಮೂಲೆ ಮತ್ತಿತರರು ಉಪಸ್ಥಿತರಿದ್ದರು.