ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿ ಅವಿರೋಧ ಆಯ್ಕೆ
ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಅಧ್ಯಕ್ಷ – ಉಪಾಧ್ಯಕ್ಷ ರ ಆಯ್ಕೆಗೆ ದಿನ ನಿಗದಿಯಾಗಿದ್ದು ಎರಡು ಸ್ಥಾನಕ್ಕೂ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿರುವುದಿಂದ ಅವರು ಅವಿರೋಧವಾಗಿ ಆಯ್ಕೆಯಾದರು.ಚುನಾವಣಾಧಿಕಾರಿಯಾಗಿದ್ದು ಸಹಕಾರ ಇಲಾಖೆಯ ಶೋಭಾ ಎನ್.ಎಸ್. ರವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ನಿರ್ದೇಶಕರಾದ ಪಿ.ಸಿ.ಜಯರಾಮ, ಎ.ವಿ.ತೀರ್ಥರಾಮ, ಜಾಕೆ ಸದಾನಂದ ಗೌಡ, ಚಂದ್ರಾ ಕೋಲ್ಚಾರ್, ಪಿ.ಎಸ್.ಗಂಗಾಧರ್, ಮೋಹನ್ ರಾಮ್ ಸುಳ್ಳಿ, ಶೈಲೇಶ್ ಅಂಬೆಕಲ್ಲು, ಲಕ್ಷ್ಮೀನಾರಾಯಣ ನಡ್ಕ, ದೊಡ್ಡಣ್ಣ ಬರೆಮೇಲು, ಸದಾನಂದ ಮಾವಜಿ, ದಾಮೋದರ ನಾರ್ಕೋಡು, ನಳಿನಿ ಸೂರಯ್ಯ, ಪ್ರೇಮಾ ಲೋಕೇಶ್, ಜಯಲಲಿತಾ ಬಡ್ಡಡ್ಕ, ವೃತ್ತಿಪರ ನಿರ್ದೇಶಕರಾದ ಡಾ.ಎನ್.ಎ.ಜ್ಞಾನೇಶ್ ಇದ್ದರು.ಸೊಸೈಟಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಸ್ವಾಗತಿಸಿ, ವಂದಿಸಿದರು.