ಎಡಮಂಗಲ; ಭಕ್ತಿ ಸಂಭ್ರಮದಿಂದ ನಡೆದ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ

0

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಐದು ದಿನಗಳ ಉತ್ಸವಾದಿಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಭಕ್ತಿ ಸಂಭ್ರಮದಿಂದ ನಡೆಯುತ್ತಿದೆ.
ಫೆ.12ರಂದು ರಾತ್ರಿ ಧ್ವಜಾರೋಹಣ, ಶ್ರೀ ರಂಗಪೂಜೆ, ಬಲಿಹೊರಟು ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಫೆ.13ರಂದು ರಾತ್ರಿ ಬಲಿ ಹೊರಟು ಉತ್ಸವ ಮತ್ತು ತರವಾಡು ಮಾಲೆಂಗ್ರಿ ಪಿಲಿಕುಂಜ ಸ್ಥಾನದಿಂದ ಶ್ರೀ ಮಹಾಲಿಂಗರಾಯ ದೈವದ ಭಂಡಾರ ಬಂದು ಓಲೆ ಸವಾರಿ, ಹೊಸಮಜಲು ಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ನೇಲ್ಯಾರು ನೇಮ ಹಾಗೂ ಉಳ್ಳಾಲ್ತಿ ನೇಮ, ಬೆಳಗ್ಗೆ ಹಸಿರುವಾಣಿ ಮೆರವಣಿಗೆ ನಡೆಯಿತು. ಫೆ.14ರಂದು ಬೆಳಿಗ್ಗೆ ಬಲಿಹೊರಟು ಉತ್ಸವ, ಶ್ರೀ ದೇವರ ದರ್ಶನಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ವಸಂತಕಟ್ಟೆಯಲ್ಲಿ ಪೂಜೆ ನಡೆಯಿತು.

ಫೆ.15ರಂದು ಬೆಳಿಗ್ಗೆ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಬಲಿ ಹೊರಟು ದೇವರ ಉತ್ಸವ ಬಲಿಯೊಂದಿಗೆ ಕೋಲಾಟ, ಮಹಾ ರಥೋತ್ಸವ, ಪಾಟಾಳಿ ಕಟ್ಟಿ ಪೂಜೆ ಮತ್ತು ಮರೋಳಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಉದ್ರಾಂಡಿ ದೈವಗಳ ಓಲೆ ಸವಾರಿ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಟ್ಟೆ ಪೂಜೆ ನಂತರ ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಭೂತಬಲಿ ಮತ್ತು ಶ್ರೀ ದೇವರ ಶಯನೋತ್ಸವ ನಡೆಯಿತು.
ಫೆ.16 ರಂದು ಬೆಳಿಗ್ಗೆ ಕವಾಟೋದ್ಘಾಟನೆ, ತೈಲಾಭಿಷೇಕ, ಪಂಚಾಮೃತಾಭಿಷೇಕ, ಅಪರಾಹ್ನ ಶ್ರೀ ಎಲ್ಯಾರು ದೈವಗಳ ನೇಮ, ಮಿತ್ತೂರು ನಾಯರ್ ದೈವದ ನೇಮ, ರಾತ್ರಿ ಬಲಿಹೊರಟು ವಸಂತ ಕಟ್ಟೆಯಲ್ಲಿ ಸಾರ್ವಜನಿಕ ಕಟ್ಟೆ ಪೂಜೆ, ಬಿಲ್ವಪತ್ರೆ ಕಟ್ಟೆಯಲ್ಲಿ ಕಟ್ಟೆ ಪೂಜೆ, ನಂತರ ನೂಚಿಲ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಕಟ್ಟೆ ಪೂಜೆ ಹಾಗೂ ಕುಮಾರಧಾರ ಭಂಡಾರಗಯದಲ್ಲಿ ಅವಭೃತಸ್ನಾನ, ಧ್ವಜ ಅವರೋಹಣ ನಡೆಯಿತು.
ಉತ್ಸವಾದಿಗಳಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಹರಿ ನೂಚಿಲ, ಸದಸ್ಯರುಗಳಾದ ಪ್ರಧಾನ ಅರ್ಚಕ ಸೀತಾರಾಮಯ್ಯ ನೂಚಿಲ, ರಾಮಕೃಷ್ಣ ರೈ ಮಾಲೆಂಗಿರಿ, ಗಿರೀಶ್ ನಡುಬೈಲು, ಪದ್ಮನಾಭ ಪುಳಿಕುಕ್ಕು, ರವೀಂದ್ರ ದೇರ್ಲ, ಅನಂತಕೃಷ್ಣ ಪರ್ಲ, ಜಯಶೀಲ ಏನಡ್ಕ, ರೇಷ್ಮಾ ಬಳಕ್ಕಬೆ ಹಾಗೂ ವಿವಿಧ ಸಮಿತಿಯವರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಫೆ.12ಸಂಜೆ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ,ಫೆ. 13 ರಾತ್ರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿ ನಾಕೂರು ಮತ್ತು ಜಿಲ್ಲಾ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ ಪಾಪಣ್ಣ ವಿಜಯ ಗುಣಸುಂದರಿ (ತುಳು ಕಥಾನಕ),ಫೆ.14 ರಾತ್ರಿಧಾರ್ಮಿಕ ಸಭಾ ಕಾರ್ಯಕ್ರಮ,
ಫೆ.14ರಂದುರಾತ್ರಿ ಕಲಾಸಂಗಮ ಕಲಾವಿದರಿಂದ ತುಳು ನಾಟಕ ದೈವರಾಜೆ ಶ್ರೀ ಬಬ್ಬುಸ್ವಾಮಿ ನಡೆಯಿತು.ಫೆ‌.15ರಂದು ಶ್ರೀ ಲಕ್ಷ್ಮಣ ಆಚಾರ್ಯ ಬಳಗದವರಿಂದ ಕೀಲು ಕುದುರೆ ಮತ್ತು ಬೊಂಬೆಯಾಟ ಸಂಜೆ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.