ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣ ನಾರ್ಣಕಜೆಯಲ್ಲಿ ನಡೆಯಿತು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕುಮಾರ್ ಕೋಟೆಮಲೆ ವಹಿಸಿದ್ದರು.
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ಅಧಿಕಾರಿ ಅರಬಣ್ಣ ಪೂಜಾರಿ ವಹಿಸಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷೆ ವಂದನಾ ಹೊಸ್ತೋಟ, ಸದಸ್ಯರಾದ ಯಜ್ಞೆಶ್ವರ, ವೇಣುಗೋಪಾಲ ಪುನುಕುಟ್ಟಿ, ವೇಣುಗೋಪಾಲ ತುಂಬೆತಡ್ಕ, ಶೀಲಾವತಿ ಬೊಳ್ಳಾಜೆ, ವನಿತಾ ಬೊಳ್ಳಾಜೆ, ಭಾಗೀರಥಿ ಎರ್ಮೆಟ್ಟಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ವರದಿ ಮಂಡಿಸಿದರು.
ಬಳಿಕ ಚರ್ಚೆ ನಡೆಯಿತು.