ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ

0

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆಯವರು ಆಯ್ಕೆಯಾಗಿದ್ದಾರೆ. ಇಂದು ದೇವಸ್ಥಾನದಲ್ಲಿ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯ ವಸಂತ ಪೆಲ್ತಡ್ಕ ಸೂಚಿಸಿ, ಸತ್ಯಪ್ರಸಾದ್ ಗಬ್ಬಲ್ಕಜೆ ಅನುಮೋದಿಸಿದರು. ಆಡಳಿತಾಧಿಕಾರಿಯಾಗಿದ್ದ ಅವಿನ್ ರಂಗತ್ತಮಲೆ, ದೇವಸ್ಥಾನದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಯು.ಕೆ.ತೀರ್ಥರಾಮ ಪರ್ನೋಜಿ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಚಂಚಲಾಕ್ಷಿ ಕುಲ್ಚಾರು, ಮಾಲತಿ ಹಾಸ್ಪಾರೆ, ಕೇಶವ ಮೂರ್ತಿ ಉಪಸ್ಥಿತರಿದ್ದರು.