ಅಜ್ಜಾವರ ಗ್ರಾಮದ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶಿವಪೂಜೆ

0

ಅಜ್ಜಾವರ ಗ್ರಾಮದ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶಿವಪೂಜೆ, ಗುರುಪೂಜೆ, ಗಣತಿಪೂಜೆ, ಪುಸ್ತಕ ಬಿಡುಗಡೆ, ಭಜನಾ ಸತ್ಸಂಗ ಕಾರ್ಯಕ್ರಮ ಫೆ.26ರಂದು ನಡೆಯಿತು.

ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಅವರು ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿ ವಸುದೈವ ಕುಟುಂಬಕಂ ಮತ್ತು ಕಲಿಕೆಯ ಮಹಿಮೆಯನ್ನು ಬಿಡುಗಡೆಗೊಳಿಸಿದರು.

ಪ್ರೊ. ಅನಿಲ್ ಬಿ.ವಿ, ಸ್ವಾಮೀಜಿ‌ ಶ್ರೀ ಯೋಗೇಶ್ವರನಾಂದ ಸರಸ್ವತಿ ಉಪಸ್ಥಿತರಿದ್ದರು.

ಸುಳ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಡಾ.ಹರ್ಷವರ್ಧನ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಆಶ್ರಮದ ಟ್ರಸ್ಟಿ ಪ್ರಣವಿ ಸ್ವಾಗತಿಸಿದರು.ಶಿಕ್ಷಕಿ ಸುನಂದ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.