
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವವು ನಿನ್ನೆ ರಾತ್ರಿ ನಡೆಯಿತು. ನಿನ್ನೆ ಸಂಜೆ ಭಜನೆ, ರಾತ್ರಿ ರುದ್ರಾಭಿಷೇಕ, ರಂಗಪೂಜೆ, ಉತ್ಸವ ಬಲಿ ನಡೆಯಿತು.
ಇಂದು ಬೆಳಿಗ್ಗೆ ಗಣಪತಿ ಹವನ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಊರ, ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.