ಪುತ್ತೂರಿನಲ್ಲಿ ನಡೆದ ಘಟನೆ
ಪುತ್ತೂರು ಪೇಟೆ ಸಮೀಪ ರಸ್ತೆ ಅಪಘಾತದಲ್ಲಿ ಪಂಜದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು (ಮಾ.6) ಸಂಜೆ ವರದಿಯಾಗಿದೆ.
ಪಂಜ ಸಮೀಪದ ಕೂತ್ಕುಂಜ ಗ್ರಾಮದ ಸಂಪ ಮನೆ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತರು. ಅವರು ಬೈಕ್ ನಲ್ಲಿ ಹೋಗುತ್ತಿದ್ದಾಗ ವಾಹನವೊಂದು ಡಿಕ್ಕಿಯಾಗಿದೆ.. ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ , ಮೊಮ್ಮಕ್ಕಳನ್ನು ಅಗಲಿದ್ದಾರೆ.