ನೂತನ ಪಲ್ಲಕ್ಕಿಯಲ್ಲಿ ದೈವಗಳ ಭಂಡಾರ ಆಗಮನ
ಸಾಂಸ್ಕೃತಿಕ ಕಾರ್ಯಕ್ರಮ-ಸನ್ಮಾನ

ಇತಿಹಾಸ ಪ್ರಸಿದ್ದ ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋ ತ್ಸವ ಭಕ್ತಿ ಸಡಗರದಿಂದ ನಡೆಯಿತು.

ಮಾ.14ರಂದು ಬೆಳಿಗ್ಗೆ ಮುಂಡೋಡಿ ತರವಾಡು ಮನೆಯಿಂದ ಶ್ರೀ ದೈವಗಳ ಭಂಡಾರ ಬರುವುದು, ಶ್ರೀ ರುದ್ರಚಾಮುಂಡಿ ದೈವಸ್ಥಾನ ದಿಂದ ದೈವದ ಬಂಡಾರ ಬರುವುದು, ರಾತ್ರಿ ಗಂಟೆ 9.00ಕ್ಕೆ ಉಗ್ರಾಣ ತುಂಬಿಸುವುದು, ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.00ಕ್ಕೆ ತಳೂರು ಹಾಗೂ ಮಾಳಿಗೆಯಿಂದ ಪಲ್ಲಕ್ಕಿ ಉತ್ಸವದೊಂದಿಗೆ ದೈವಗಳ ಭಂಡಾರ ಬರುವ ಕಾರ್ಯಕ್ರಮ ನಡೆಯಿತು.

(ಮಾ. 15) ಇಂದು ಪ್ರಾತಃಕಾಲ 2.00ಕ್ಕೆ ಶ್ರೀ ರಾಜ್ಯದೈವದ ನೇಮ, ಬೆಳಿಗ್ಗೆ ಗಂಟೆ 9.00 ಕ್ಕೆ ಶ್ರೀ ರುದ್ರಚಾಮುಂಡಿ ದೈವದ ನೇಮ, ಬೆಳಿಗ್ಗೆ ಗಂಟೆ 11.30ಕ್ಕೆ ಶ್ರೀ ಪುರುಷ ದೈವದ ನೇಮ, ಮಧ್ಯಾಹ್ನ ಅನ್ನ ಸಂತರ್ಪಣೆ, ಮಧ್ಯಾಹ್ನ ಗಂಟೆ 2.00ಕ್ಕೆ ಶ್ರೀ ಪಂಜುರ್ಲಿ ದೈವದ ನೇಮ ನಡೆಯಿತು. ಸಂಜೆ 4.00 ಗಂಟೆಗೆ ಧ್ವಜವರೋಹಣದೊಂದಿಗೆ ಜಾತ್ರೋತ್ಸವ ಸಂಪನ್ನಗೊಳ್ಳಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ನಿನ್ನೆ ಸಾಯಂಕಾಲ ಗಂಟೆ 7-00ರಿಂದ ಸ್ಥಳೀಯ ಅಂಗನವಾಡಿ, ಶಾಲಾ ಮಕ್ಕಳಿಂದ ಮತ್ತು ಊರವರಿಂದ ಸಾಂಸ್ಕೃತಿಕ ವೈಭವ ನಡೆಯಿತು.
ಇದೇ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಸದಸ್ಯರನ್ನು ಮತ್ತು ನೂತನ ಪಲ್ಲಕ್ಕಿ ಕೊಡುಗೆ ನೀಡಿದ ಹರ್ಷ ಕುಮಾರ್ ಮುಂಡೋಡಿ ಮತ್ತು ಬಹುಮುಖ ಪ್ರತಿಭೆ ನಿರಂಜನ್ ಕಡ್ಲಾರು ರವರನ್ನು ನೂತನ ವ್ಯವಸ್ಥಾಪನಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.
ರಾತ್ರಿ ಗಂಟೆ 10-00ರಿಂದ ಕೆ.ಎಸ್.ಎಸ್. ಕಾಲೇಜು ಸುಬ್ರಹ್ಮಣ್ಯ ಇದು ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ಮೂಡಿಬರಲಿದೆ. ರಾತ್ರಿ ಗಂಟೆ 12-00ರಿಂದ ಗಾನ ಕೋಗಿಲೆ ರಚನಾ ಚಿದ್ಗಲ್ಲು ಇವರ ಸುಮಧುರ ಕಂಠಸಿರಿಯ ಭಾಗವತಿಗೆಯಲ್ಲಿ ಯಕ್ಷತರಂಗ ಪ್ರಸ್ತುತ ಪಡಿಸುವ ಶ್ರೀ ಕೃಷ್ಣ ಲೀಲಾಮೃತ ಕನ್ನಡ ಪೌರಾಣಿಕ ಯಕ್ಷಗಾನ ಪ್ರಸಂಗ ನಡೆಯಿತು.

ಈ ಬಾರಿ ನೂತನ ಪಲ್ಲಕ್ಕಿ ಯಲ್ಲಿ ಭಂಡಾರ ಬರುವುದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಾಳಿಕಾ ಪ್ರಸಾದ್ ಮುಂಡೋಡಿ, ಸದಸ್ಯರಾದ ಸೋಮಶೇಖರ ಕೇವಳ, ಶ್ರೀಮತಿ ಗೀತಾ ತಿಮ್ಮಪ್ಪ ಕಡ್ಯ, ಜಯರಾಮ ಕಡ್ಲಾರ್, ಶ್ರೀಮತಿ ಜಾನಕಿ ಚಿದಾನಂದ ಪೇರಳಕಜೆ, ಯಂ. ಆರ್., ಪುರುಷೋತ್ತಮ ಮುಂಡೋಡಿ, ಅಜಯ್ ವಾಲ್ತಾಜೆ, ಕರುಣಾಕರ ದೇವರಗುಂಡ, ಶೂರಪ್ಪ ದೇವ, ಮಡಪ್ಪಾಡಿ ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಪಾಲ್ಗೊಂಡು ಶ್ರೀ ದೈವಗಳ ಪ್ರಸಾದ ಸ್ವೀಕರಿಸಿದರು.
