ಆಮಂತ್ರಣ ಪತ್ರ ಬಿಡುಗಡೆ
ಕನಕಮಜಲು ಗ್ರಾಮದ ನೆಡಿಲು ಕುತ್ಯಾಳ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಶ್ರೀ ಶಿರಾಡಿ ರಾಜನ್ ದೈವದ ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವವು ಏ. 1 ಮತ್ತು 2 ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮಾ. 20 ರಂದು ನಡೆಯಿತು.
ದೈವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಬ್ರಹ್ಮ ಕಲಶೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.