ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಸುರಿದ ಭಾರೀ ಗಾಳಿ – ಮಳೆಗೆ ರಾಷ್ಟೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರಿನ ಮೇಲೆ ಮರ ಬಿದ್ದು, ಕಾರು ಜಖಂಗೊಂಡ ಘಟನೆ ಮಾ.26 ರಂದು ಸಂಜೆ ನಡೆದಿದೆ.
ಕಲ್ಲುಗುಂಡಿ ಪೂರ್ಣಿಮಾ ಟೆಕ್ಸ್ ಟೇಲ್ಸ್ ಮಾಲೀಕ ಬಿ.ಆರ್ ಪದ್ಮ್ಮಯ್ಯ ಅವರು ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದರು. ಸಂಜೆ ವೇಳೆ ಸುರಿದ ಭಾರೀ ಮಳೆ – ಗಾಳಿಗೆ ಮರವೊಂದು ದಿಢೀರ್ ಕಾರಿನ ಮೇಲೆ ಬಿದ್ದಿದ್ದು , ಕಾರು ಜಖಂಗೊಂಡಿದೆ.


