ಸಣ್ಣ ಪುಟ್ಟ ಗಾಯ- ಅಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಥಾರ್ ಜೀಪೊಂದು ತೋಟಕ್ಕೆ ಪಲ್ಟಿಯಾದ ಘಟನೆ ಇಂದು ಅಡ್ಕಾರ್ ಬಳಿ ಸಂಭವಿಸಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಥಾರ್ ಜೀಪು ಅಡ್ಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತೋಟಕ್ಕೆ ಉರುಳಿ ಬಿದ್ದಿದ್ದು, ಜೀಪ್ನೊಳಗಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಜೀಪ್ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.