ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ

0

ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದ ಫಲಿತಾಂಶ ಪ್ರಕಟ

ಶೇ. 100 ಫಲಿತಾಂಶದ ದಾಖಲು

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾ. 2025 ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 01 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.

ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಡಾ. ಧನ್ಯಶ್ರೀ ಯು. ಬಿ. ಹಾಗೂ ಡಾ. ಪ್ರಿಯ ಪಿ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ., ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ ಕಾರ್ಯದರ್ಶಿಗಳಾದ ಡಾ ಐಶ್ವರ್ಯ ಕೆ ಸಿ., ಜೊತೆ ಕಾರ್ಯದರ್ಶಿಗಳಾದ ಶ್ರೀ. ಹೇಮನಾಥ್ ಕೆ. ವಿ., ಕೋಶಾಧಿಕಾರಿ ಗಳಾದ ಡಾ. ಗೌತಮ್ ಗೌಡ, ಕೌಂನ್ಸಿಲ್ ಮೆಂಬರ್ ಗಳಾದ ಶ್ರೀ. ಜಗದೀಶ್ ಅಡ್ತಲೆ, ಶ್ರೀಮತಿ. ಮೀನಾಕ್ಷಿ ಕೆ. ಹೆಚ್., ಶ್ರೀ. ಧನಂಜಯ ಮದುವೆಗದ್ದೆ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಅಭಿನಂದಿಸಿದ್ದಾರೆ.