ಅಜ್ಜಾವರ ಗ್ರಾಮದ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವವು ಎ.೪ರಿಂದ ಅರಂಭಗೊಂಡು ಎ.೯ರವರೆಗೆ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಎ.೪ರಂದು ಬೆಳಗ್ಗೆ ಉಗ್ರಾಣ ತುಂಬಿಸಲಾಯಿತು. ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಿತು.

ಎ.೫ರಂದು ಪೂರ್ವಾಹ್ನ ನವಕ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಸಂಜೆ ೬ ರಿಂದ ಸಾಂಸ್ಕೃತಿಕ ಸೌರಭ ಸ್ಥಳೀಯರಿಂದ ಮತ್ತು ಶಾಲಾ ವಿದ್ಯಾರ್ಥಿಗಳಿಂದ. ರಾತ್ರಿ ಶ್ರೀ ಭೂತಬಲಿ, ದೈವಗಳ ತಂಬಿಲ, ಸಿಡಿಮದ್ದಿನ ಪ್ರದರ್ಶನ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಎ.೬ರಂದು ಬೆಳಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಗಡಿಪ್ರಸಾದ ಮಂತ್ರಾಕ್ಷತೆ, ಸಂಪ್ರೋಕ್ಷಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಎ.೮ರಂದು ರಾತ್ರಿ ತೊಡಙಲ್ ನಂತರ ಅನ್ನಸಂತರ್ಪಣೆ. ರಾತ್ರಿ ೮.೩೦ರಿಂದ ಶ್ರೀ ಭುವನೇಶ್ವರಿ ಯಕ್ಷಗಾನ ಕಲಾಮಂಡಳಿ ಸುಳ್ಯ ಇದರ ಹಿರಿಯ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ-ರಾಣಿ ಚಿತ್ರಾಂಗದೆ ನಡೆಯುವುದು. ಎ.೯ರಂದು ಮಧ್ಯಾಹ್ನ ಶ್ರೀ ವಿಷ್ಣುಮೂರ್ತಿ ದೈವದ ಕೋಲ, ಅನ್ನಸಂತರ್ಪಣೆ ನಡೆಯುವುದು.