108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ,ಚಂಡಿಕಾ ಹೋಮ,108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಎ.10 ಮತ್ತು ಎ.11 ರಂದು ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ಎ.10 ರಂದು ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ,ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ,ವಾಸ್ತು ಹೋಮ,ವಾಸ್ತು ಪೂಜಾ ಬಲಿ,ಮಹಾಪೂಜೆ,ಗಣಪತಿ ದೇವರಿಗೆ ಮೂಡಪ್ಪ ಸೇವೆ ಮತ್ತು ರಂಗಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಎ.11 ರಂದು ಬೆಳಿಗ್ಗೆ ಗಂಟೆ 7.30 ರಿಂದ 108 ತೆಂಗಿನಕಾಯಿ ಮಹಾಗಣಪತಿ ಹೋಮ,ಚಂಡಿಕಾಹೋಮ,ಶ್ರೀ ಸತ್ಯನಾರಾಯಣ ಪೂಜೆ ,ಬಿಂಬ ಶುದ್ಧಿ,ಒಂಚವಿಂಶತಿ ಕಲಶ ಪೂಜೆ ನಡೆಯಲಿದೆ.
ಬೆಳಿಗ್ಗೆ ಗಂಟೆ 11.00 ಕ್ಕೆ ಹೋಮದ ಪೂರ್ಣಾಹುತಿ,ಸುವಾಸಿನಿ ಪೂಜೆ ನಡೆಯಲಿದೆ.
ಮಧ್ಯಾಹ್ನ ಪಂಚಾಮೃತಾಭಿಷೇಕ,ಪಂಚವಿಂಶತಿ ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.