ಏ 24 : ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರವರ ರಂಗ ಪ್ರವೇಶ

0

ಕು.ವಿದುಷಿ ಸಿಂಚನಲಕ್ಷ್ಮೀ ಕೊಡಂದೂರ್ ರವರ ರಂಗ ಪ್ರವೇಶವು ಏ 24ರಂದು ವಿಟ್ಲ ಗಾರ್ಡನ್ ಅಡಿಟೋರಿಯಂ ನಲ್ಲಿ ನಡೆಯಲಿದೆ.
ಪೆರ್ನಾಜೆ: ಸುಮ್ಮನೆ ಕುಳಿತವರು ಹೆಜ್ಜೆ ಗುರುತನ್ನು ಮೂಡಿಸಲಾರರು ಹೆಜ್ಜೆ ಗುರುತು ಮೂಡಿಸಬೇಕೆಂದರೆ ಎದ್ದು ನಡೆಯಲೇಬೇಕು ಕಲಾತ್ಮಕ ಅರ್ಥಪೂರ್ಣವಾದ ಹೆಜ್ಜೆ ಗೆಜ್ಜೆಯ ಸದ್ದಿಗೆ ಅದ್ಭುತ ಭರತನಾಟ್ಯದ ರಂಗಪ್ರವೇಶವು ಏ 24ರಂದು ನಾಟ್ಯ ಸಿಂಚನ ಲಕ್ಷ್ಮಿ ಕೊಡಂದೂರ್ ರವರು.ವಿಟ್ಲ ಗಾರ್ಡನ್ ಆಡಿಟೋರಿಯಂ ನಲ್ಲಿ
ಸಂಜೆ 5 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ಪ್ರದರ್ಶಿಸಲಿದ್ದಾರೆ.


ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾಳೆ.
ಇವರು ನಾಟ್ಯ ವಿದ್ಯಾಲಯ (ರೀ) ಕುಂಬಳೆ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಇವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಕೆ ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು ಅವರ ಪುತ್ರಿ. ಡಾ .ಸಚಿನ್ ಸುಬ್ರಮಣ್ಯ ಕೊಡಂದೂರು ಅಣ್ಣನ ಪ್ರೋತ್ಸಾಹ , ಕುಮಾರ್ ಪೆರ್ನಾಜೆ ಸ್ವರ ಸಿಂಚನ ಕಲಾತಂಡದ ಅರಳು ಪ್ರತಿಭೆಯಾಗಿದ್ದು. ಭರತನಾಟ್ಯ ಸಂಗೀತಕ್ಕೂ ಸೈ. ಎನಿಸಿ ತನ್ನ ಕಲಾ ಪ್ರೌಡಿಮೇಯನ್ನು ಮೆರೆದಿದ್ದಾರೆ.
ಇವಳು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ (BE)Data Science ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
2024ರ ನವರಾತ್ರಿಗೆ ಧರ್ಮಸ್ಥಳದಲ್ಲಿ ಸಂಗೀತ ಕಚೇರಿ ನೀಡಿದ್ದು ಇವಳ ಹೆಗ್ಗಳಿಕೆ.
ಅಲ್ಲದೆ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡಿದ್ದಾರೆ .
ಇದೇ ಏಪ್ರಿಲ್ ತಿಂಗಳಲ್ಲಿ ಭರತನಾಟ್ಯ ರಂಗ ಪ್ರವೇಶವನ್ನು ನೀಡಲಿದ್ದಾಳೆ ಇವಳಿಗೆ ಈಗಾಗಲೇ ಪೆರ್ನಾಜೆ ಪ್ರಶಸ್ತಿ ,ಗಡಿನಾಡ ದ್ವನಿ ಪ್ರಶಸ್ತಿ, ಸುಮ ಸೌರಭ ಹಲವಾರು ಸಂಘ ಸಂಸ್ಥೆಗಳು ಗೌರವಿಸಿದೆ.

ಕುಮಾರ್ ಪೆರ್ನಾಜೆ ನಿರ್ದೇಶನದಲ್ಲಿ ಜಾಲ್ಸೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ,ಶ್ರೀ ಕಾವು ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಮತ್ತು ಕಾವು ಅಯ್ಯಪ್ಪ ಸ್ವಾಮಿ ಕಾರ್ಯಕ್ರಮದಲ್ಲಿ, ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಭರತನಾಟ್ಯ ಇದ್ದು ಅಲ್ಲದೆ ಕೋಟೆ ಸುಬ್ರಮಣ್ಯ ಸ್ವಾಮಿ ಷಷ್ಠಿ ಮಹೋತ್ಸವದಲ್ಲಿ, ಸುಬ್ರಮಣ್ಯ ದೇವಸ್ಥಾನ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಿರು ಷಷ್ಠಿ ಮಹೋತ್ಸವದಲ್ಲಿ ಸತತ ಐದು ವರ್ಷಗಳಿಂದ ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ್ದು ಇವಳ ಹೆಗ್ಗಳಿಕೆ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವೈವಿಧ್ಯಮಯ
ಕಾರ್ಯಕ್ರಮ ಕಾರ್ಯಕ್ರಮ ನೀಡಿದ್ದು ಇವರ ಕಂಚಿನ ಕಂಠದಲ್ಲಿ ಗಾಯನ ಕೇಳುವುದೇ ಚೆಂದ..

ವೇದಮೂರ್ತಿ ಶ್ರೀ ಅನಂತನಾರಾಯಣ ಭಟ್ ಪರಕ್ಕಜೆ ದೀಪ ಪ್ರಜ್ವಲನ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಿರ್ದೇಶಕರು ಶ್ರೀ ನಾಟ್ಯಂಜಲಿ ಕಲಾ ಅಕಾಡೆಮಿ (ರಿ) ಸುರತ್ಕಲ್. ಕರ್ನಾಟಕ ಕಲಾ ಶ್ರೀ ವಿದ್ವಾನ್ ಕೆ ಚಂದ್ರಶೇಖರ್ ನಾವಡ ಅಧ್ಯಕ್ಷತೆಯನ್ನು ವಹಿಸಲಿದ್ದು, ಮೃದಂಗವಾದಕರು ಡಾ . ವಿ ಆರ್ ನಾರಾಯಣ್ ಪ್ರಕಾಶ್ ಕಲ್ಲಿಕೋಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ,ನಿರ್ದೇಶಕರು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ) ಪುತ್ತೂರು, ವಿದ್ವಾನ್ ದೀಪಕ್ ಕುಮಾರ್, ಪ್ರಾಂಶುಪಾಲರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಡಾ. ಮಹೇಶ್ ಪ್ರಸನ್ನ ಪುತ್ತೂರು ಕೆ ಕೃಷ್ಣಯ್ಯ ವ್ಯವಸ್ಥಾಪಕರು ಶ್ರೀ ಭಗವತಿ ದೇವಸ್ಥಾನ ವಿಟ್ಲ ಶ್ರೀ ಕೇಶವ ಆರ್ ವಿ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಾಗಿರುತ್ತಾರೆ.
ವಿಶೇಷ ಆಹ್ವಾನಿತರಾಗಿ ಕಲಾ ನಿರ್ದೇಶಕ ಬರಹಗಾರ ರಾಷ್ಟ್ರ ಪ್ಶಶಸ್ತಿ ವಿಜೇತ ಕುಮಾರ್ ಪೆರ್ನಾಜೆ ಭಾಗವಹಿಸಲಿದ್ದಾರೆ.

ಹಿಮ್ಮೇಳನ ಕಲಾವಿದರು ನಟುವಾಂಗ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಕುಂಬ್ಳೆ ಹಾಡುಗಾರಿಕೆ ವಿದ್ವಾನ್ ಸಿಜು ಕರುಣಾಕರನ್ ಕಣ್ಣೂರ್, ಸಿ ವಸಂತಕುಮಾರ ಗೋ ಸಾಡ ಮೃದಂಗ ವಿದ್ವಾನ್ ಸುರೇಶ್ ಬಾಬು ಕಣ್ಣೂರ್, ಕೊಳಲು ಶ್ರೀ ರಾಹುಲ್ ಪಯ್ಯನೂರ್, ಫ್ರೀಡಂ ಪ್ಯಾಡ್ನಲ್ಲಿ ಶ್ರೀ ಪ್ರಭಾಕರ್ ಮಲ್ಲ.
ಮಲ್ಲಿಕಾ ಸಿದ್ದ ಕಟ್ಟೆ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ ಎಂದು ಸವಿತಾ ಕೋಡoದೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.