ಸುಳ್ಯದಿಂದ 10ಕ್ಕೂ ಹೆಚ್ಚು ಬಸ್ಸುಗಳಲ್ಲಿ ತೆರಳಿದ ಮುಸ್ಲಿಂ ಭಾಂದವರು
ಮಂಗಳೂರಿನ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ನಲ್ಲಿ ಏ.18ರಂದು ನಡೆಯುವ ವಕ್ಫ್ ಕಾಯ್ದೆ ವಿರುದ್ಧದ ಪ್ರತಿಭಟನೆಗೆ ಸುಳ್ಯದ ವಿವಿಧ ಭಾಗಗಳಿಂದ 10ಕ್ಕೂ ಹೆಚ್ಚು ವಾಹನಗಳಲ್ಲಿ ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳಿದ್ದಾರೆ. ವಕ್ಫ್ ಕಾಯ್ದೆ ವಿರುದ್ಧ ದಕ ಜಿಲ್ಲಾ ಉಲಮಾ ಒಕ್ಕೂಟ ವತಿಯಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.


ತಲೆತಲಾಂತರಗಳಿAದ ಮುಸ್ಲಿಮರು ರಕ್ಷಿಸಿಕೊಂಡು ಬರುತ್ತಿರುವ ವಕ್ಫ್ ಸೊತ್ತುಗಳನ್ನು ಕಬಳಿಸುವ ಹುನ್ನಾರವನ್ನು ಹೊಂದಿರುವ ನೂತನ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಮುಸ್ಲಿಮರಾದ ನಾವೆಲ್ಲರೂ ವಿರೋಧಿಸುತ್ತೇವೆ. ಈ ನಿಟ್ಟಿನಲ್ಲಿ ಈ ಪ್ರತಿಭಟನೆಗೆ ನಾವು ಬೆಂಬಲ ನೀಡಿ ಮಂಗಳೂರಿಗೆ ತೆರಳುತಿದ್ದೇವೆ ಎಂದು ಸುಳ್ಯ ದಿಂದ ಹೊರಟ ಮುಖಂಡರು ಸುದ್ದಿಗೆ ತಿಳಿಸಿದ್ದಾರೆ.