ಮಂಗಳೂರಿನ ಬಿಂದು ಸಾಹಿತ್ಯ ಸಂಭ್ರಮದಲ್ಲಿ ಪೂರ್ಣಿಮಾ ಕಾರಿಂಜ ರವರ ಭಿನ್ನರಾಗ ಕೃತಿ ಬಿಡುಗಡೆ, ಕನ್ನಡ ಶ್ರೀ ಪ್ರಶಸ್ತಿ ಪ್ರದಾನ

0

ಮಂಗಳೂರಿನ ಕಿನ್ನಿಗೋಳಿಯಲ್ಲಿ ಯುಗಪುರುಷ ಕಥಾ ಬಿಂದು ಪ್ರಕಾಶನದ ಪ್ರಕಾಶಕರಾದ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಥಾ ಬಿಂದು ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪೂರ್ಣಿಮಾ ಕಾರಿಂಜ ರವರ ‘ಭಿನ್ನರಾಗ ‘ಎಂಬ ಕವನ ಸಂಕಲನ ಬಿಡುಗಡೆ ಮತ್ತು ಕನ್ನಡ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏ. 18ರಂದು ನಡೆಯಿತು.
ಕರ್ನಾಟಕ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರರೂರು ಕೃತಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪೂರ್ಣಿಮಾರಿಗೆ ‘ಕನ್ನಡ ಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೂರ್ಣಿಮಾ ಕಾರಿಂಜರ ತಂದೆ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.