ದ.ಕ ಸಂಪಾಜೆ ಗೂನಡ್ಕ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಘಟನೆ ಎ21.ರಂದು ರಾತ್ರಿ 2 ಗಂಟೆಗೆ ಸಂಭವಿಸಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕೆ.ಎ.21.ಎಂ. ಎ .1978 ಕಿವಾ ಕಾರು, ಸುಳ್ಯದ ಹಳೆಗೇಟು ನಿವಾಸಿ ಎಸ್ ಕುಮಾರ್ ಮತ್ತು ಕುಟುಂಬ ಪ್ರಯಾಣಿಸುತ್ತಿದ್ದು, ಒಮ್ಮಿಂದೊಮ್ಮೆಲೆ ಕಾರು
ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಚರಂಡಿಗೆ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಬಂದು, ಕಲ್ಲುಗುಂಡಿ ಠಾಣಾ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಳ್ಯ ಪಿ ಎಸ್ ಐ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.