ಪಾಕಿಸ್ತಾನದ ಉಗ್ರರ ವಿರುದ್ಧ ಸಿಂದೂರ ಆಪರೇಷನ್ ಹೆಸರಿನಡಿ ಕಾರ್ಯಾಚರಣೆಯಲ್ಲಿ ನಿರತರಾದ ಭಾರತೀಯ ಸೈನಿಕರಿಗೆ ಒಳಿತು ಉಂಟು ಮಾಡುವ ನಿಟ್ಟಿನಲ್ಲಿ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಮೇ.09 ರಂದು ರಾತ್ರಿ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು