ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷತೆ

0

ಮೂಡದ ಒಮ್ಮತ : ಸಭೆಯಿಂದ ಹೊರ ನಡೆದ ಮಹೇಶ್ ಕುಮಾರ್ ಕರಿಕ್ಕಳ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಗೆ ಒಂದು ಗಂಟೆಯಿಂದ ಮುಚ್ಚಿದ ಬಾಗಿಲ ನಡುವೆ ಸಮಾಲೋಚನೆ ನಡೆದರೂ ಒಮ್ಮತ ಮೂಡದೆ ಮಹೇಶ್ ಕುಮಾರ್ ಕರಿಕ್ಕಳ ಹೊರ ಸಭೆಯಿಂದ ಹೊರ ನಡೆದಿದ್ದಾರೆ.

ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆ ಎದುರಾಯಿತು.

ಈ ಹಿನ್ನೆಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಡೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಕ್ಕೆ ಹೋಗಿ ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು ಹೊರ ಹೋಗುವಂತೆ ವಿನಂತಿಸಿದರು. ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು.

ಈ ಮಧ್ಯೆ ಪಕ್ಷದ ಜಿಲ್ಲಾ ಹೈಕಮಾಂಡ್ ಬಂಡೆದ್ದ ಸದಸ್ಯರನ್ನು ಸಂಪರ್ಕಿಸಿ ಮನವೊಲಿಸುವ ಕಾರ್ಯ ಮಾಡಿದರೂ ಫಲಕಾರಿಯಾಗಲಿಲ್ಲ.

ಸಭೆಗೆ ಇ.ಒ.ಬಂದ ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು. ಆದರೆ ಹರೀಶ್ ಇಂಜಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಲಿಲ್ಲವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದರು.

ಈ ವೇಳೆ ಸುದ್ದಿ ಪ್ರತಿಕ್ರಿಯೆ ಕೇಳಿದಾಗ ” ನೋ ಕಮೆಂಟ್ಸ್ ಎಂದಷ್ಟೇ ” ಹೇಳಿ ತೆರಳಿದರು.