ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

0

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 13 ರಂದು ವಾರ್ಷಿಕೋತ್ಸವವು ನಡೆಯಿತು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಡ್ವಕೇಟ್ ಅಶ್ವಿನ್ ಎಲ್.ಶೆಟ್ಟಿಯವರು ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ.ಸೀತಾರಾಮ ರೈರವರು ವಾರ್ಷಿಕೋತ್ಸವವು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಒಟ್ಟು ಸೇರಿಆಚರಿಸುವಂತಹಕಾರ್ಯಕ್ರಮ. ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದರು.


ಕಾರ್ಯಕ್ರಮದ ಅತಿಥಿಗಳಲ್ಲಿ ಓರ್ವರಾದಡೆಪ್ಯೂಟಿ ಸುಪರಿಟೆಂಡೆಂಟ್‌ಆಫ್ ಪೋಲೀಸ್ ಬಂಟ್ವಾಳ ಇವರುಜೀವನದ ಪ್ರತಿಯೊಂದುಕಾರ್ಯವು ಕಾನೂನು ಬದ್ಧವಾದದ್ದು, ಇದನ್ನುಅರಿತು ಬಾಳಿದಾಗ ಜೀವನದಲ್ಲಿಯಶಸ್ಸು ಗಳಿಸಲು ಸಾಧ್ಯಎಂದರು. ಇನ್ನೋರ್ವ ಅತಿಥಿಗಳಾಗಿದ್ದ ಶ್ರೀ ದುರ್ಗಾಂಬ ಪದವಿ ಪೂರ್ವಕಾಲೇಜು ಅಲಂಕಾರಿನ ಪ್ರಾಂಶುಪಾಲರಾದ ಶ್ರೀಮತಿ ರೂಪಾಜೆರೈರವರು ಹೆತ್ತತಾಯಿ ಮತ್ತು ಹೊತ್ತತಾಯಿ ಸ್ವರ್ಗಕ್ಕಿಂತ ಮೇಲು. ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತನ್ನು ರೂಢಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಷ್ಟಿಗಳಾದ ಶ್ರೀ.ಸುಂದರರೈ, ಶ್ರೀಮತಿ.ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಶಶಿಕಲಾ ಎಸ್ ಆಳ್ವ, ವಿದ್ಯಾರಶ್ಮಿ ಪ್ರಥಮದರ್ಜೆಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ .ಪುಷ್ಪಾವತಿ, ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಯುತ.ಶೇಷಗಿರಿ ಎಂ ಉಪಸ್ಥಿತರಿದ್ದರು.


ಸಂಸ್ಥೆಯ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀಎಸ್.ರೈ.ಯವರು ವಾರ್ಷಿಕ ವರದಿಯನ್ನು ವಾಚಿಸಿದರು.ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನು ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸ್ವಾತಿ ಸ್ವಾಗತಿಸಿ ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಲಾವಣ್ಯ ವಂದಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಪ್ರಥಮ ಬಿಸಿ.ಎ ವಿದ್ಯಾರ್ಥಿಯಾದ ಮಹಮ್ಮದ್ ಅನೀಸ್ ಹಾಗೂ ದ್ವಿತೀಯ ಬಿ.ಎ ವಿದ್ಯಾರ್ಥಿ ದೀಕ್ಷಿತ್ ಮಾಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಲೀಮತ್ ಸಝಾನ ನಿರ್ವಹಿಸಿದರು. ಕಾರ್ಯಕ್ರಮವು ಅಭೀಜ್ಞಾ ಹಾಗೂ ತಂಡದವರ ಅಶಯಗೀತೆ ಯೊಂದಿಗೆ ಆರಂಭಗೊಂಡಿತು. ಮುಂದೆ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.